Wednesday, December 21, 2011

ದಾವಣಗೆರೆಯಿಂದ...


ದಾವಣಗೆರೆಯ ಬ್ಲಾಗ್ ಮಿತ್ರ ಅಕ್ಕರೆಯಿಂದ ಕೊಟ್ಟ ಪ್ರಶಸ್ತಿ ಪತ್ರ:

"ನೆನಪುಗಳ ನೆನಪು ಸದಾ ನೆನಪಾಗಿರಲು"

ಅನನ್ಯ ಅದ್ವಿತೀಯ ಅದ್ಭುತಗಳ ಕಾರಣ
ನೀವು ಬಿಡುವ ಅಪರೂಪದ ಪದಗಳ ಬಾಣ
ಅಲ್ಲೊಂದು ಕಥೆ ಕವನ ಕಾಲ ಹರಣ
ಅಲ್ಲೊಮ್ಮೆ ನಿಮ್ಮ ಪರಿಚಯದ ಕ್ಷಣ

ಅಂಧ ದೀಪಾವಳಿಯ ಆ ಒಂದು ಕವನ
ಮೈಮರೆತು ಎಲ್ಲೋ ಹೋಯಿತು ಮನ
ಅದರ ನಂತರ ಓದುತ್ತಾ ಪ್ರತಿ ದಿನ
ಬಾನೆತ್ತರದ ಭಾವನೆಗಳ ನಿಮ್ಮ ಕವನ

ಮತ್ತೆ ಮಾಡಿದಿರಿ ದಂಡಯಾತ್ರೆಯ
ಹೇಳಿದಿರಿ ನಿಮ್ಮ ಗೆಳತಿಯರ ಪರಿಚಯ
ಹಳೇ ಭಾವನೆಗಳಿಗೆ ಹೊಸ ಪ್ರೀತಿಯ
ಸೇರಿಸಿ ಬರೆದಿರಿ ಮಜವಾದ ಕವಿತೆಯ

ಮರಗಿಡಗಳ ಮೇಲಿನ ನಿಮ್ಮ ಪ್ರೀತಿ
ಆಗಿತ್ತು ಅಲ್ಲಿ ಕವನಕ್ಕೆ ಹೊಸ ಸಂಗತಿ
ಗಿಂಡಿಯ ಮಾಣಿ , ಪಿಕಲಾಟದ ಪಜೀತಿ ಜೀ ಹುಜೂರ್
ಇನ್ನು ನಮ್ಮನ್ನು ಕಾಡುತೈತಿ ಹೊಸ
ರಾಮಾಯಾಣದ ಸುಗ್ರೀವರಂತೆ

ಎಲ್ಲರೂ ಕಾಣುವರಂತೆ ನಿಮ್ಮದಿಲ್ಲಿ ಚಿಂತೆ
ನಿಮ್ಮ ಮಾತುಗಳಲ್ಲಿ ನೀವು ಗುರುವಿನಂತೆ
ಅದೇನೇ ಇರಲಿ ಕೊನೆಯಲ್ಲಿ ಮಗುವಿನಂತೆ
ಮರ ಹಿಡಿದ ನಿಮ್ಮನ್ನು ಮಗುವಿನಂತೆ ಕಂಡಿದೆ

ನನ್ನ ಮನಸ್ಸಿನ ನೆನಪುಗಳು ಕವನವಾಗಿದೆ
ಬರೆಯಲು ಹಲವು ದಿನಗಳ ಯೋಚನೆ ಮಾಡಿದೆ
ನೆನಪುಗಳ ನೆನಪು ಸದಾ
ನೆನಪಾಗಿರಲು ಕವನ ಬರೆದೆ.. :)

|| ಪ್ರಶಾಂತ್ ಖಟಾವಕರ್ ||

Friday, December 9, 2011

ಜೀ ಹುಜೂರ್!

ನನ್ನ "ಜೀ ಹುಜೂರ್!" ಕವನಕ್ಕೆ ಭಾವಾರ್ಥ :

(ಸಂಸ್ಥೆಗಳು ಕಾರ್ಮಿಕರನ್ನು ಹೇಗೆ ಬಳಸಿಕೊಳ್ಳುತ್ತವೆ ಮತ್ತು ಕೆಲವು ಚಮಚಾಗಳು ಹೇಗೆ ಬದುಕಿ ಬಿಡುತ್ತವೆ, ಅನ್ನುವುದೇ ಈ ಕವನ)

ಹವಾ ನಿಯಂತ್ರಿತ ಕೊಠಡಿಯಲಿ ಕೂತು ಸಂಸ್ಥೆಯ ಧಣಿಗಳು ಕಿರುಚಾಡಿದರೆ,ಮಳೆ ಬಂದಾಗಷ್ಟೇ ಕಾಣುವ ಯಕ್ಚಿತ್ ಈಚಲ್ ಹುಳುಗಳಂತ ನಮಗೆ ಅಕಾಲದಲ್ಲಿ ರೆಕ್ಕೆ ಬಂದು ಹಾರಾಡಿಬಿಡುತ್ತೇವೆ.

ಬಿಟ್ಟಿಯಾಗಿ ಬಿಟ್ಟಿದ್ದೀವಿ ಇವರಿಗೆ ನಮ್ಮತನ ಫಲವತ್ತಾಗಿದ್ದರೆ ಇಲ್ಲೇಕೆ ಸೇರುತ್ತಿದ್ದೆವು ನಾವು?
ಚಂದ್ರನ ನೆಲದಂತೆ ಸುಖದ ಬೆಳೆ ಕಾಣದಂತವರು,
ಭತ್ತ ಅಕ್ಕಿ ಬಿಟ್ಟು ಅನ್ನ ಹಾಕುತ್ತೀವಿ ಅಂತ ಗಿಲೀಟು ಮಾಡುತ್ತಾರೆ,
ಈ ಸಂಬಳವೋ ಮಳೆಗೆ ತುಂಬೋ ಕುಂಟೆಯಂತಹ ಪುಟ್ಟ ಹೊಂಡ
ಸಂಸಾರ ಖರ್ಚಲಿ ಮುಳಗೆದ್ದರೆ ಕಾಸು ಖಾಲಿ.

ಬ್ರಹ್ಮನೂ ಸಮಯ ಹಾಳು ಮಾಡಿದರು
ಆತ ನಮ್ಮ ಜನುಮದ ಮಹಾನ್ ಲೇಖಕನವನೇ?
ಸುಮ್ಮನೆ ತೀಟೆಗೆ ಗೀಚಿದ್ದಾನೆ
ಬಗ್ಗಿಸಿ ಬರೆದು ಹುಟ್ಟಿಸಿದರಾಯ್ತೇ
ನಮ್ಮ ಮೆದುಳು ತಲೆಯಲಿಲ್ಲ ಅದಿರುವುದೇ ಮಂಡಿ ಚಿಪ್ಪಿನ ಮೇಲೆ
ಕಾಟಾಚರದ ಬರೆದ ಹಣೆ ಬರಹ!

ನಾವೆಲ್ಲ ಹೊರಗೆ ಧೈರ್ಯದ ಮುಖವಾಡ ಧರಿಸಿದ ವೀರರು
ಎಲ್ಲೋ ಕತ್ತಿ ಮಸೆಯುತ್ತಾರೆ ಅಂತ ಭಯ ಪಟ್ಟು
ಮನದ ಬಿಲ ಸೇರಿಕೊಂಡು ಬಕ್ಕಾಬಾರಲು ಮಲಗಿ ಬಿಡುತ್ತೇವೆ,
ಯಾರಾದರೂ ಹೊಗಳಿದರೆ ನಾವು ವಿಕ್ರಮಾದಿತ್ಯರು
ಅವರು ದಾಟಿಸುತ್ತಾರೆ ನಮ್ಮ ಹೆಗಲಿಗೆ ಹೆಣ,
ಛತ್ರಿ ಬುದ್ಧಿಯ ಸಹೋದ್ಯೋಗಿಗಳೇ ನಿಮಗಿದೋ
ಉಧೋ ಉಧೋ ಪ್ರಣಾಮ!

ಕಮ್ಮೀ ಸಂಬಳಕ್ಕೆ ಸಾಕ್ಕಿದ್ದೇವೆ
ಕೆಲಸ ತೆಗೆಯಿರಿ ನಮ್ಮ ಗಣಿ ಆಳಕೂ
ಹಿಂಡಿರಿ ನಮ್ಮ ಕಡೆ ಹನಿ ನಿಮಗೆ ಕಾಸಾಗಲೀ
ಹಿಡಿಯಿರೀ ನಮ್ಮ ಮೂಗು ದಾರ,
ನಿಸ್ತಂತು ಛಾಟಿ ಮೊಬೈಲಿನಲಿ ಆಙ್ಞಾಪಿಸಿರಿ
ಬರಲಿ ಬೆನ್ನ ಬಾಸುಂಡೆ
ನಿಮ್ಮ ತಿಜೋರಿ ದೇಹ ಕೊಬ್ಬಿನಿಂದ ಉಬ್ಬಲಿ, ಹುಜೂರ್!

ಈ ಹೆಗಲು ಇಷ್ಟವಾಯಿತೇ ಸ್ವಾಮಿ?
ಅಂಡೂರಿಸಿ ಬಿಡಿ ಯಮ ಭಾರದ ಕಲಸದ ಒತ್ತಡಕ್ಕೆ ಒಗ್ಗಿದೆ ದೇಹ,
ನಾವಾದರೂ ದಡ್ಡಪ್ಪಗಳು ಹಗಲೆಲ್ಲ ಹೊತ್ತೆವು ಅಂಬಾರಿ
ಒಮ್ಮೆಲೆ ದಿಟ್ಟಿಸಿ ಬೆಚ್ಚಿದೆವು
ಒಳಗೆ ನಿಮ್ಮ ಪೈಶಾಚ್ಯ ಅಟ್ಟಹಾಸ!

ಗಾಜು ಕಿಟಕಿಯ ಹಿಂದಿನ ಕಾವಲು ಕ್ಯಾಮರಾದ
ಬರೀ ಕಣ್ಣ ಕಾವಲು ಸಂಬಳದ ವಾಹನವಿರದ ಕಾಲಾಳುಗಳಾದ ನಮಗೆ
ಕೆಲಸ ಕಳೆದು ಕೊಳ್ಳುವ ಭಯದ ತುರಿಕೆ ಸಾಂಕ್ರಾಮಿಕ...
ಸುಳಿವಿರದ ಸಾವಿಗೆ ಹೆದರಿ
ಬೆವರಿದೆವು ಬೆದರಿದೆವು
ಹಲುಬಿದೆವು ಮುಂದಿರುವ ಸುಖ ಸುಖಿಸದೆ!

[ಈಗ ದಯಮಾಡಿ ಮತ್ತೊಮ್ಮೆ ಕವನ ಓದಿಕೊಳ್ಳಿ :]

http://badari-poems.blogspot.com/2011/12/blog-post.html

ತಣ್ಣನೆ ಅರಮನೆ ಗುಡುಗು
ಈಚಲಿಗೋ ಅಕಾಲ ರೆಕ್ಕೆ!

ಬಿಟ್ಟೇ ಬಿಟ್ಟೀದ್ದೀವಿ ನಮ್ಮೊಳಗ
ಖರಾಬು ಬಂಜರು ಭೂಮಿ
ಉಳುಮೆ ಕಾಣದ ಚಂದ್ರಮೈ,
ಅನ್ನ ಬೆಳೆಯುವ ಗಿಲೀಟೇಕೆ
ಇಲ್ಲಿ ಪ್ರಾಪ್ತಿಯೇ ಕುಂಟೆ
ಮುಳುಗೆದ್ದರೆ ನೀರೇ ಬರಿದು

ಬರಮಪ್ಪನೂ ಸಮಯಗೇಡಿ
ಮಹಾನ್ ಲೇಖಕನವನೇ?
ತೀಟೆ ಶಾಸ್ತ್ರದ ಒಕ್ಕಣೆ
ಬಗ್ಗಿಸಿ ಬರೆದು ಹುಟ್ಟಿಸಿದರಾಯ್ತೇ
ನಮ್ಮ ಮಂಡಿ ಚಿಪ್ಪಿನ ಮೇಲೆ
ಕಾಟಾಚರದ ಹಣೆ ಬರಹ!

ಹೊರಗೆ ಮುಸುಗುವೀರರು
ಕತ್ತಿ ನೂರುವ ಸದ್ಧಿಗಂಜಿ
ಬಿಲದಾಳ ಬಕ್ಕಾಬಾರಲು,
ಪರಾಕ

Sunday, December 4, 2011

ಓಶೋ! : ಸರಿಯೇ ತಪ್ಪೇ?

ಇತ್ತೀಚೆಗೆ ಬ್ಲಾಗ್ ಒಂದರಲ್ಲಿ ಧ್ಯಾನದ ಮುಖೇನ ಮನಃ ಶುದ್ದೀಕರಣದ ಬಗ್ಗೆ ಆ ಲೇಖಕರು ಪ್ರಸ್ತಾಪಿಸುತ್ತಾ, ಓಶೋರವರ ಬೋಧನೆಗಳನ್ನು ಉದಾಹರಿಸಿದರು. ಇದು ಭಾರೀ ಚರ್ಚೆಗೆ ಗ್ರಾಸವಾಯಿತು.

ಓದುಗರೊಬ್ಬರು ಕಮೆಂಟಿಸುತ್ತಾ ಓಶೋ ಸ್ಥಿತಪ್ರಜ್ಞರಲ್ಲ, ಅವರು ಹೊಸ ಆವಿಷ್ಕಾರವನ್ನು ಮಾಡಲು ಹೊರಟು ಗುರಿ ತಲುಪದೇ ಇದ್ದವರು. ಎಂದು ಅಭಿಪ್ರಾಯವನ್ನು ದಾಖಲಿಸಿದರು. ಹೀಗೆ ಯಾವುದನ್ನೂ ಸಾರಾಸಗಟಾಗಿ ತಿರಸ್ಕರಿಸುವುದು ಪೂರ್ವಾಗ್ರಹ ಪೀಡಿತ ಕಲ್ಪನೆ ಅಂತ ನನ್ನ ಅನಿಸಿಕೆ.

ಅವರ ಆಶ್ರಮದ ಅಂತರಂಗದ ಊಹಾಪೋಹ ಸುದ್ದಿಗಳು, ಐಷಾರಾಮಿ ಜೀವನ ಶೈಲಿ ಮತ್ತು ಕಾಸ್ಟ್ಲೀ ಕಾರುಗಳ ಪ್ರೀತಿಗಳ ಹೊರತಾಗಿಯೂ ಅವರ ಅಪಾರ ಙ್ಞಾನ ಸಂಪತ್ತು ಮತ್ತು ಅವರ ನೂರಾರು ಆದ್ಯಾತ್ಮಿಕ ಪುಸ್ತಕ ಬರವಣಿಗೆಯನ್ನು ಗೌರವಿಸಬೇಕಾಗುತ್ತದೆ.

ಶಾಸ್ತ್ರ, ಧರ್ಮ, ಗುರು, ವಾಸ್ತು, ಜ್ಯೋತಿಷ್ಯ, ಸಂಗೀತ ಮತ್ತು ಸೌಂದರ್ಯ ಹೀಗೆ ಅವರವರ ಭಾವನೆಗಳಿಗೆ ಮತ್ತು ನಂಬಿಕೆಗೆ ಬಿಟ್ಟದ್ದು. ಯಾವುದನ್ನು ನಂಬ ಬೇಕು ಯಾರನ್ನು ಒಪ್ಪಬೇಕು ಎನ್ನುವುದು ಪ್ರತಿಯೊಬ್ಬ ಮಾನವನ ವಯುಕ್ತಿಕ ಹಕ್ಕು.

ಓಶೋ ಪರ ವಿರೋಧಿ ಚರ್ಚೆಗಳಿಗೆ ಇದು ವೇದಿಕೆಯಾಗ ಬಾರದು. ಒಳ್ಳೆಯ ವಿಚಾರಗಳು ಎಲ್ಲಿಂದ ಬಂದರೂ ಅದನ್ನು ವಿಶ್ಲೇಷಿಸಿ ಸ್ವೀಕರಿಸಬೇಕೆ ಹೊರತು, ಅದರ ಮೂಲವನ್ನು ಕೆದಕುತ್ತಾ ಕೂರ ಬಾರದು.

ಓಶೋ ತುಂಬಾ ಓದಿಕೊಂಡವರು. ಅವರು ಜಗತ್ತಿನ ಙ್ಞಾನ ಮೂಲಗಳನ್ನು ಅರ್ಥೈಸಿಕೊಂಡವರು. ಅದನ್ನೆಲ್ಲ ಕ್ರೋಢೀಕರಿಸಿ ಪುಸ್ತಕ ಮತ್ತು ದ್ವನಿ ಮುಖೇನ ಇಂದಿಗೂ ಪ್ರಚಲಿತದಲಿ ಇಟ್ಟವರು.
ಪ್ರತಿ ಗುರುವು ಸ್ವಯಂಭು ಗುರುವಾಗಲು ಸಾಧ್ಯವೇ ಇಲ್ಲ. ಆತನದೂ ನಿರಂತರ ಶಿಷ್ಯ ವೃತ್ತಿ. ತಾನು ಗ್ರಹಿಸಿದ, ಕಲಿತ ಅಥವಾ ಓದಿಕೊಂಡ ಙ್ಞಾನವನ್ನು ಆತ ಹಂಚಲು ಕೂರುತ್ತಾನೆ. ಹಲವು ಮೂಲಗಳಿಂದ ನಾವು ಓದಿಕೊಳ್ಳಲಾರದ ಙ್ಞಾನವನ್ನು ಆತ ಶುದ್ಧೀಕರಿಸಿ ನಮಗೆ ಗುಕ್ಕು ನೀಡುತ್ತಾ ಹೋಗುತ್ತಾನೆ.

ಬೋಧನೆಯಲಿ ಸತ್ವವಿಲ್ಲದಿದ್ದರೆ ಅದು ಬೇಗನೆ ಅಪ್ರಸ್ತುತವಾಗಿ ನಶಿಸಿ ಹೋಗುತ್ತದೆ. ಪೊಳ್ಳು ಮಾರಿಕೊಳ್ಳುವ ಡೋಂಗಿ ಗುರುಗಳ ಮದ್ಯೆ ತೀರಿಕೊಂಡು ದಶಕಗಳು ಕಳೆದರೂ ಇನ್ನೂ ಪ್ರಸ್ತುತದಲ್ಲೇ ಉಳಿಯಲು ಅವರಲ್ಲೇನೋ ಗಟ್ಟಿ ಮಾಲು ಇರಬೇಕಲ್ಲವೇ!

ಗೀತೆಯಲ್ಲಿನ ಶ್ಲೋಕಗಳ ಸಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳ ಬೇಕೇ ವಿನಃ, ಯುದ್ಧ ಭೂಮಿಯಲ್ಲಿ ಎಲ್ಲ ಕೆಲಸ ಬಿಟ್ಟು ಶ್ರೀಕೃಷ್ಣ ಪರಮಾತ್ಮನು ಗೀತಾಮೃತ ಏಕೆ ಬೋಧಿಸಿಕೊಂಡು ಕೂತರು ಎಂದು ಕ್ಯಾತೆ ತೆಗೆದರೆ, ವಾದಕ್ಕೆ ಬೀಳುವುದೇ ವ್ಯರ್ಥ!

ಈ ಲೇಖನಕ್ಕೆ ಕಾರಣವಾದದ್ದು ಡಾ|| ಡಿ.ಟಿ.ಕೆ. ಮೂರ್ತಿಯವರ ಈ ಲೇಖನ. ಬೋನಸ್ ಆಗಿ ಆ ಲೇಖನಕ್ಕೆ ಇತರರು ಕಾಮೆಂಟುಗಳನ್ನೂ ಓದಿರಿ:

"ಧ್ಯಾನದಲ್ಲಿ ಫ್ಲಷ್ ಮಾಡಿ!"
http://dtkmurthy.blogspot.com/2011/12/flush-meditatively.html