"ನೆನಪುಗಳ ನೆನಪು ಸದಾ ನೆನಪಾಗಿರಲು"
ಅನನ್ಯ ಅದ್ವಿತೀಯ ಅದ್ಭುತಗಳ ಕಾರಣ
ನೀವು ಬಿಡುವ ಅಪರೂಪದ ಪದಗಳ ಬಾಣ
ಅಲ್ಲೊಂದು ಕಥೆ ಕವನ ಕಾಲ ಹರಣ
ಅಲ್ಲೊಮ್ಮೆ ನಿಮ್ಮ ಪರಿಚಯದ ಕ್ಷಣ
ಅಂಧ ದೀಪಾವಳಿಯ ಆ ಒಂದು ಕವನ
ಮೈಮರೆತು ಎಲ್ಲೋ ಹೋಯಿತು ಮನ
ಅದರ ನಂತರ ಓದುತ್ತಾ ಪ್ರತಿ ದಿನ
ಬಾನೆತ್ತರದ ಭಾವನೆಗಳ ನಿಮ್ಮ ಕವನ
ಮತ್ತೆ ಮಾಡಿದಿರಿ ದಂಡಯಾತ್ರೆಯ
ಹೇಳಿದಿರಿ ನಿಮ್ಮ ಗೆಳತಿಯರ ಪರಿಚಯ
ಹಳೇ ಭಾವನೆಗಳಿಗೆ ಹೊಸ ಪ್ರೀತಿಯ
ಸೇರಿಸಿ ಬರೆದಿರಿ ಮಜವಾದ ಕವಿತೆಯ
ಮರಗಿಡಗಳ ಮೇಲಿನ ನಿಮ್ಮ ಪ್ರೀತಿ
ಆಗಿತ್ತು ಅಲ್ಲಿ ಕವನಕ್ಕೆ ಹೊಸ ಸಂಗತಿ
ಗಿಂಡಿಯ ಮಾಣಿ , ಪಿಕಲಾಟದ ಪಜೀತಿ ಜೀ ಹುಜೂರ್
ಇನ್ನು ನಮ್ಮನ್ನು ಕಾಡುತೈತಿ ಹೊಸ
ರಾಮಾಯಾಣದ ಸುಗ್ರೀವರಂತೆ
ಎಲ್ಲರೂ ಕಾಣುವರಂತೆ ನಿಮ್ಮದಿಲ್ಲಿ ಚಿಂತೆ
ನಿಮ್ಮ ಮಾತುಗಳಲ್ಲಿ ನೀವು ಗುರುವಿನಂತೆ
ಅದೇನೇ ಇರಲಿ ಕೊನೆಯಲ್ಲಿ ಮಗುವಿನಂತೆ
ಮರ ಹಿಡಿದ ನಿಮ್ಮನ್ನು ಮಗುವಿನಂತೆ ಕಂಡಿದೆ
ನನ್ನ ಮನಸ್ಸಿನ ನೆನಪುಗಳು ಕವನವಾಗಿದೆ
ಬರೆಯಲು ಹಲವು ದಿನಗಳ ಯೋಚನೆ ಮಾಡಿದೆ
ನೆನಪುಗಳ ನೆನಪು ಸದಾ
ನೆನಪಾಗಿರಲು ಕವನ ಬರೆದೆ.. :)
|| ಪ್ರಶಾಂತ್ ಖಟಾವಕರ್ ||