ನನ್ನ "ಜೀ ಹುಜೂರ್!" ಕವನಕ್ಕೆ ಭಾವಾರ್ಥ :
(ಸಂಸ್ಥೆಗಳು ಕಾರ್ಮಿಕರನ್ನು ಹೇಗೆ ಬಳಸಿಕೊಳ್ಳುತ್ತವೆ ಮತ್ತು ಕೆಲವು ಚಮಚಾಗಳು ಹೇಗೆ ಬದುಕಿ ಬಿಡುತ್ತವೆ, ಅನ್ನುವುದೇ ಈ ಕವನ)
ಹವಾ ನಿಯಂತ್ರಿತ ಕೊಠಡಿಯಲಿ ಕೂತು ಸಂಸ್ಥೆಯ ಧಣಿಗಳು ಕಿರುಚಾಡಿದರೆ,ಮಳೆ ಬಂದಾಗಷ್ಟೇ ಕಾಣುವ ಯಕ್ಚಿತ್ ಈಚಲ್ ಹುಳುಗಳಂತ ನಮಗೆ ಅಕಾಲದಲ್ಲಿ ರೆಕ್ಕೆ ಬಂದು ಹಾರಾಡಿಬಿಡುತ್ತೇವೆ.
ಬಿಟ್ಟಿಯಾಗಿ ಬಿಟ್ಟಿದ್ದೀವಿ ಇವರಿಗೆ ನಮ್ಮತನ ಫಲವತ್ತಾಗಿದ್ದರೆ ಇಲ್ಲೇಕೆ ಸೇರುತ್ತಿದ್ದೆವು ನಾವು?
ಚಂದ್ರನ ನೆಲದಂತೆ ಸುಖದ ಬೆಳೆ ಕಾಣದಂತವರು,
ಭತ್ತ ಅಕ್ಕಿ ಬಿಟ್ಟು ಅನ್ನ ಹಾಕುತ್ತೀವಿ ಅಂತ ಗಿಲೀಟು ಮಾಡುತ್ತಾರೆ,
ಈ ಸಂಬಳವೋ ಮಳೆಗೆ ತುಂಬೋ ಕುಂಟೆಯಂತಹ ಪುಟ್ಟ ಹೊಂಡ
ಸಂಸಾರ ಖರ್ಚಲಿ ಮುಳಗೆದ್ದರೆ ಕಾಸು ಖಾಲಿ.
ಬ್ರಹ್ಮನೂ ಸಮಯ ಹಾಳು ಮಾಡಿದರು
ಆತ ನಮ್ಮ ಜನುಮದ ಮಹಾನ್ ಲೇಖಕನವನೇ?
ಸುಮ್ಮನೆ ತೀಟೆಗೆ ಗೀಚಿದ್ದಾನೆ
ಬಗ್ಗಿಸಿ ಬರೆದು ಹುಟ್ಟಿಸಿದರಾಯ್ತೇ
ನಮ್ಮ ಮೆದುಳು ತಲೆಯಲಿಲ್ಲ ಅದಿರುವುದೇ ಮಂಡಿ ಚಿಪ್ಪಿನ ಮೇಲೆ
ಕಾಟಾಚರದ ಬರೆದ ಹಣೆ ಬರಹ!
ನಾವೆಲ್ಲ ಹೊರಗೆ ಧೈರ್ಯದ ಮುಖವಾಡ ಧರಿಸಿದ ವೀರರು
ಎಲ್ಲೋ ಕತ್ತಿ ಮಸೆಯುತ್ತಾರೆ ಅಂತ ಭಯ ಪಟ್ಟು
ಮನದ ಬಿಲ ಸೇರಿಕೊಂಡು ಬಕ್ಕಾಬಾರಲು ಮಲಗಿ ಬಿಡುತ್ತೇವೆ,
ಯಾರಾದರೂ ಹೊಗಳಿದರೆ ನಾವು ವಿಕ್ರಮಾದಿತ್ಯರು
ಅವರು ದಾಟಿಸುತ್ತಾರೆ ನಮ್ಮ ಹೆಗಲಿಗೆ ಹೆಣ,
ಛತ್ರಿ ಬುದ್ಧಿಯ ಸಹೋದ್ಯೋಗಿಗಳೇ ನಿಮಗಿದೋ
ಉಧೋ ಉಧೋ ಪ್ರಣಾಮ!
ಕಮ್ಮೀ ಸಂಬಳಕ್ಕೆ ಸಾಕ್ಕಿದ್ದೇವೆ
ಕೆಲಸ ತೆಗೆಯಿರಿ ನಮ್ಮ ಗಣಿ ಆಳಕೂ
ಹಿಂಡಿರಿ ನಮ್ಮ ಕಡೆ ಹನಿ ನಿಮಗೆ ಕಾಸಾಗಲೀ
ಹಿಡಿಯಿರೀ ನಮ್ಮ ಮೂಗು ದಾರ,
ನಿಸ್ತಂತು ಛಾಟಿ ಮೊಬೈಲಿನಲಿ ಆಙ್ಞಾಪಿಸಿರಿ
ಬರಲಿ ಬೆನ್ನ ಬಾಸುಂಡೆ
ನಿಮ್ಮ ತಿಜೋರಿ ದೇಹ ಕೊಬ್ಬಿನಿಂದ ಉಬ್ಬಲಿ, ಹುಜೂರ್!
ಈ ಹೆಗಲು ಇಷ್ಟವಾಯಿತೇ ಸ್ವಾಮಿ?
ಅಂಡೂರಿಸಿ ಬಿಡಿ ಯಮ ಭಾರದ ಕಲಸದ ಒತ್ತಡಕ್ಕೆ ಒಗ್ಗಿದೆ ದೇಹ,
ನಾವಾದರೂ ದಡ್ಡಪ್ಪಗಳು ಹಗಲೆಲ್ಲ ಹೊತ್ತೆವು ಅಂಬಾರಿ
ಒಮ್ಮೆಲೆ ದಿಟ್ಟಿಸಿ ಬೆಚ್ಚಿದೆವು
ಒಳಗೆ ನಿಮ್ಮ ಪೈಶಾಚ್ಯ ಅಟ್ಟಹಾಸ!
ಗಾಜು ಕಿಟಕಿಯ ಹಿಂದಿನ ಕಾವಲು ಕ್ಯಾಮರಾದ
ಬರೀ ಕಣ್ಣ ಕಾವಲು ಸಂಬಳದ ವಾಹನವಿರದ ಕಾಲಾಳುಗಳಾದ ನಮಗೆ
ಕೆಲಸ ಕಳೆದು ಕೊಳ್ಳುವ ಭಯದ ತುರಿಕೆ ಸಾಂಕ್ರಾಮಿಕ...
ಸುಳಿವಿರದ ಸಾವಿಗೆ ಹೆದರಿ
ಬೆವರಿದೆವು ಬೆದರಿದೆವು
ಹಲುಬಿದೆವು ಮುಂದಿರುವ ಸುಖ ಸುಖಿಸದೆ!
[ಈಗ ದಯಮಾಡಿ ಮತ್ತೊಮ್ಮೆ ಕವನ ಓದಿಕೊಳ್ಳಿ :]
http://badari-poems.blogspot.com/2011/12/blog-post.html
ತಣ್ಣನೆ ಅರಮನೆ ಗುಡುಗು
ಈಚಲಿಗೋ ಅಕಾಲ ರೆಕ್ಕೆ!
ಬಿಟ್ಟೇ ಬಿಟ್ಟೀದ್ದೀವಿ ನಮ್ಮೊಳಗ
ಖರಾಬು ಬಂಜರು ಭೂಮಿ
ಉಳುಮೆ ಕಾಣದ ಚಂದ್ರಮೈ,
ಅನ್ನ ಬೆಳೆಯುವ ಗಿಲೀಟೇಕೆ
ಇಲ್ಲಿ ಪ್ರಾಪ್ತಿಯೇ ಕುಂಟೆ
ಮುಳುಗೆದ್ದರೆ ನೀರೇ ಬರಿದು
ಬರಮಪ್ಪನೂ ಸಮಯಗೇಡಿ
ಮಹಾನ್ ಲೇಖಕನವನೇ?
ತೀಟೆ ಶಾಸ್ತ್ರದ ಒಕ್ಕಣೆ
ಬಗ್ಗಿಸಿ ಬರೆದು ಹುಟ್ಟಿಸಿದರಾಯ್ತೇ
ನಮ್ಮ ಮಂಡಿ ಚಿಪ್ಪಿನ ಮೇಲೆ
ಕಾಟಾಚರದ ಹಣೆ ಬರಹ!
ಹೊರಗೆ ಮುಸುಗುವೀರರು
ಕತ್ತಿ ನೂರುವ ಸದ್ಧಿಗಂಜಿ
ಬಿಲದಾಳ ಬಕ್ಕಾಬಾರಲು,
ಪರಾಕ
(ಸಂಸ್ಥೆಗಳು ಕಾರ್ಮಿಕರನ್ನು ಹೇಗೆ ಬಳಸಿಕೊಳ್ಳುತ್ತವೆ ಮತ್ತು ಕೆಲವು ಚಮಚಾಗಳು ಹೇಗೆ ಬದುಕಿ ಬಿಡುತ್ತವೆ, ಅನ್ನುವುದೇ ಈ ಕವನ)
ಹವಾ ನಿಯಂತ್ರಿತ ಕೊಠಡಿಯಲಿ ಕೂತು ಸಂಸ್ಥೆಯ ಧಣಿಗಳು ಕಿರುಚಾಡಿದರೆ,ಮಳೆ ಬಂದಾಗಷ್ಟೇ ಕಾಣುವ ಯಕ್ಚಿತ್ ಈಚಲ್ ಹುಳುಗಳಂತ ನಮಗೆ ಅಕಾಲದಲ್ಲಿ ರೆಕ್ಕೆ ಬಂದು ಹಾರಾಡಿಬಿಡುತ್ತೇವೆ.
ಬಿಟ್ಟಿಯಾಗಿ ಬಿಟ್ಟಿದ್ದೀವಿ ಇವರಿಗೆ ನಮ್ಮತನ ಫಲವತ್ತಾಗಿದ್ದರೆ ಇಲ್ಲೇಕೆ ಸೇರುತ್ತಿದ್ದೆವು ನಾವು?
ಚಂದ್ರನ ನೆಲದಂತೆ ಸುಖದ ಬೆಳೆ ಕಾಣದಂತವರು,
ಭತ್ತ ಅಕ್ಕಿ ಬಿಟ್ಟು ಅನ್ನ ಹಾಕುತ್ತೀವಿ ಅಂತ ಗಿಲೀಟು ಮಾಡುತ್ತಾರೆ,
ಈ ಸಂಬಳವೋ ಮಳೆಗೆ ತುಂಬೋ ಕುಂಟೆಯಂತಹ ಪುಟ್ಟ ಹೊಂಡ
ಸಂಸಾರ ಖರ್ಚಲಿ ಮುಳಗೆದ್ದರೆ ಕಾಸು ಖಾಲಿ.
ಬ್ರಹ್ಮನೂ ಸಮಯ ಹಾಳು ಮಾಡಿದರು
ಆತ ನಮ್ಮ ಜನುಮದ ಮಹಾನ್ ಲೇಖಕನವನೇ?
ಸುಮ್ಮನೆ ತೀಟೆಗೆ ಗೀಚಿದ್ದಾನೆ
ಬಗ್ಗಿಸಿ ಬರೆದು ಹುಟ್ಟಿಸಿದರಾಯ್ತೇ
ನಮ್ಮ ಮೆದುಳು ತಲೆಯಲಿಲ್ಲ ಅದಿರುವುದೇ ಮಂಡಿ ಚಿಪ್ಪಿನ ಮೇಲೆ
ಕಾಟಾಚರದ ಬರೆದ ಹಣೆ ಬರಹ!
ನಾವೆಲ್ಲ ಹೊರಗೆ ಧೈರ್ಯದ ಮುಖವಾಡ ಧರಿಸಿದ ವೀರರು
ಎಲ್ಲೋ ಕತ್ತಿ ಮಸೆಯುತ್ತಾರೆ ಅಂತ ಭಯ ಪಟ್ಟು
ಮನದ ಬಿಲ ಸೇರಿಕೊಂಡು ಬಕ್ಕಾಬಾರಲು ಮಲಗಿ ಬಿಡುತ್ತೇವೆ,
ಯಾರಾದರೂ ಹೊಗಳಿದರೆ ನಾವು ವಿಕ್ರಮಾದಿತ್ಯರು
ಅವರು ದಾಟಿಸುತ್ತಾರೆ ನಮ್ಮ ಹೆಗಲಿಗೆ ಹೆಣ,
ಛತ್ರಿ ಬುದ್ಧಿಯ ಸಹೋದ್ಯೋಗಿಗಳೇ ನಿಮಗಿದೋ
ಉಧೋ ಉಧೋ ಪ್ರಣಾಮ!
ಕಮ್ಮೀ ಸಂಬಳಕ್ಕೆ ಸಾಕ್ಕಿದ್ದೇವೆ
ಕೆಲಸ ತೆಗೆಯಿರಿ ನಮ್ಮ ಗಣಿ ಆಳಕೂ
ಹಿಂಡಿರಿ ನಮ್ಮ ಕಡೆ ಹನಿ ನಿಮಗೆ ಕಾಸಾಗಲೀ
ಹಿಡಿಯಿರೀ ನಮ್ಮ ಮೂಗು ದಾರ,
ನಿಸ್ತಂತು ಛಾಟಿ ಮೊಬೈಲಿನಲಿ ಆಙ್ಞಾಪಿಸಿರಿ
ಬರಲಿ ಬೆನ್ನ ಬಾಸುಂಡೆ
ನಿಮ್ಮ ತಿಜೋರಿ ದೇಹ ಕೊಬ್ಬಿನಿಂದ ಉಬ್ಬಲಿ, ಹುಜೂರ್!
ಈ ಹೆಗಲು ಇಷ್ಟವಾಯಿತೇ ಸ್ವಾಮಿ?
ಅಂಡೂರಿಸಿ ಬಿಡಿ ಯಮ ಭಾರದ ಕಲಸದ ಒತ್ತಡಕ್ಕೆ ಒಗ್ಗಿದೆ ದೇಹ,
ನಾವಾದರೂ ದಡ್ಡಪ್ಪಗಳು ಹಗಲೆಲ್ಲ ಹೊತ್ತೆವು ಅಂಬಾರಿ
ಒಮ್ಮೆಲೆ ದಿಟ್ಟಿಸಿ ಬೆಚ್ಚಿದೆವು
ಒಳಗೆ ನಿಮ್ಮ ಪೈಶಾಚ್ಯ ಅಟ್ಟಹಾಸ!
ಗಾಜು ಕಿಟಕಿಯ ಹಿಂದಿನ ಕಾವಲು ಕ್ಯಾಮರಾದ
ಬರೀ ಕಣ್ಣ ಕಾವಲು ಸಂಬಳದ ವಾಹನವಿರದ ಕಾಲಾಳುಗಳಾದ ನಮಗೆ
ಕೆಲಸ ಕಳೆದು ಕೊಳ್ಳುವ ಭಯದ ತುರಿಕೆ ಸಾಂಕ್ರಾಮಿಕ...
ಸುಳಿವಿರದ ಸಾವಿಗೆ ಹೆದರಿ
ಬೆವರಿದೆವು ಬೆದರಿದೆವು
ಹಲುಬಿದೆವು ಮುಂದಿರುವ ಸುಖ ಸುಖಿಸದೆ!
[ಈಗ ದಯಮಾಡಿ ಮತ್ತೊಮ್ಮೆ ಕವನ ಓದಿಕೊಳ್ಳಿ :]
http://badari-poems.blogspot.com/2011/12/blog-post.html
ತಣ್ಣನೆ ಅರಮನೆ ಗುಡುಗು
ಈಚಲಿಗೋ ಅಕಾಲ ರೆಕ್ಕೆ!
ಬಿಟ್ಟೇ ಬಿಟ್ಟೀದ್ದೀವಿ ನಮ್ಮೊಳಗ
ಖರಾಬು ಬಂಜರು ಭೂಮಿ
ಉಳುಮೆ ಕಾಣದ ಚಂದ್ರಮೈ,
ಅನ್ನ ಬೆಳೆಯುವ ಗಿಲೀಟೇಕೆ
ಇಲ್ಲಿ ಪ್ರಾಪ್ತಿಯೇ ಕುಂಟೆ
ಮುಳುಗೆದ್ದರೆ ನೀರೇ ಬರಿದು
ಬರಮಪ್ಪನೂ ಸಮಯಗೇಡಿ
ಮಹಾನ್ ಲೇಖಕನವನೇ?
ತೀಟೆ ಶಾಸ್ತ್ರದ ಒಕ್ಕಣೆ
ಬಗ್ಗಿಸಿ ಬರೆದು ಹುಟ್ಟಿಸಿದರಾಯ್ತೇ
ನಮ್ಮ ಮಂಡಿ ಚಿಪ್ಪಿನ ಮೇಲೆ
ಕಾಟಾಚರದ ಹಣೆ ಬರಹ!
ಹೊರಗೆ ಮುಸುಗುವೀರರು
ಕತ್ತಿ ನೂರುವ ಸದ್ಧಿಗಂಜಿ
ಬಿಲದಾಳ ಬಕ್ಕಾಬಾರಲು,
ಪರಾಕ


